22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ಕೊಡಂಗೆ ನಿವಾಸಿ ಯಶೋಧರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಚಿಕಿತ್ಸಾ ಸಹಾಯಾರ್ಥವಾಗಿ ರೂ.20,000/-ದ ಚೆಕ್ ನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ನಿರ್ದೇಶಕ ಆನಂದ ಗೌಡ ಉಜಿರೆ ಇವರ ಮೂಲಕ ಫಲಾನುಭವಿಯ ಪತ್ನಿಗೆ ಹಸ್ತಾಂತರ ಮಾಡಲಾಯಿತು.


ಈ ಸಂಧರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಕಾರ್ಯದರ್ಶಿ ಹಾಗೂ ಸ್ಪಂದನಾ ಸೇವಾ ಸಂಘದ ಸಂಚಾಲಕ ಮೋಹನ ಗೌಡ ಕೊಯ್ಯೂರು, ಸೀತಾರಾಮ್ ಸೌರಭ ಬೆಳಾಲು, ವಾಣಿ ಸೌಹಾರ್ದ- ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಸುರೇಶ್ ಕೌಡಂಗೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಮೀನಾಕ್ಷಿ ಮಹಾಬಲ ಗೌಡ ಉಪಸ್ಥಿತರಿದ್ದರು.

Related posts

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya
error: Content is protected !!