25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

ಧರ್ಮಸ್ಥಳ : ಇಲ್ಲಿಯ ನೇತ್ರಾವತಿ ಸ್ಥಾನಘಟ್ಟದ ಬಳಿ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 28ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಮನೋಜ್ (42), ರವರ ದೂರಿನಂತೆ, ಮೇ. 28 ರಂದು ಮಧ್ಯಾಹ್ನ KA 19 HG 1142 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರ ರಾಕೇಶ್ ರವರು, ಸಹಸವಾರನನ್ನಾಗಿ ಯಜ್ಞೇಶ ರವರನ್ನು ಕುಳ್ಳಿರಿಕೊಂಡು ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಚಲಾಯಿಸಿಕೊಂಡು ಹೋಗುತ್ತಾ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ಥಾನಘಟ್ಟದ ಬಳಿ ತಲುಪುತ್ತಿದ್ದಂತೆ, ಅವರ ಹಿಂದಿನಿಂದ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿರುತ್ತಾರೆ.

ಪರಿಣಾಮ ದ್ವಿ ಚಕ್ರ ವಾಹನ ಸವಾರ ಮತ್ತು ಸಹ ಸವಾರ ದ್ವಿ ಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ತೀವ್ರ ರಕ್ತಗಾಯಗೊಂಡಿರುವುದಾಗಿದೆ. ಗಾಯಾಳುಗಳ ಪೈಕಿ ರಾಕೇಶ್ ರವರು ಉಜಿರೆ ಬೆನಕ ಆಸ್ಪತ್ರೆಯಲ್ಲಿ ಹಾಗೂ ಯಜ್ಞೇಶ್ ರವರು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ. ಅಪಘಾತ ನಡೆಸಿದ ಅಪರಿಚಿತ ವಾಹನವನ್ನು ಅದರ ಚಾಲಕ ಅಪಘಾತದ ಬಳಿಕ ನಿಲ್ಲಿಸದೇ ಗಾಯಾಳುಗಳನ್ನು ಉಪಚರಿಸದೇ, ಸಂಬಂಧಪಟ್ಟವರಿಗೆ ಮಾಹಿತಿ ನೀಡಿದೇ ವಾಹನ ಸಮೇತ ಪರಾರಿಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 66/2024, ಕಲಂ: 279 ,337 ,338 ಭಾ ದಂ ಸಂ 134 (a&b) ಹಾಗೂ 187 ಐ ಎಂ ವಿ ಕಾಯ್ದೆ ಯಂತೆ ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya
error: Content is protected !!