25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

ಧರ್ಮಸ್ಥಳ : ಇಲ್ಲಿಯ ನೇತ್ರಾವತಿ ಸ್ಥಾನಘಟ್ಟದ ಬಳಿ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 28ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಮನೋಜ್ (42), ರವರ ದೂರಿನಂತೆ, ಮೇ. 28 ರಂದು ಮಧ್ಯಾಹ್ನ KA 19 HG 1142 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರ ರಾಕೇಶ್ ರವರು, ಸಹಸವಾರನನ್ನಾಗಿ ಯಜ್ಞೇಶ ರವರನ್ನು ಕುಳ್ಳಿರಿಕೊಂಡು ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಚಲಾಯಿಸಿಕೊಂಡು ಹೋಗುತ್ತಾ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ಥಾನಘಟ್ಟದ ಬಳಿ ತಲುಪುತ್ತಿದ್ದಂತೆ, ಅವರ ಹಿಂದಿನಿಂದ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿರುತ್ತಾರೆ.

ಪರಿಣಾಮ ದ್ವಿ ಚಕ್ರ ವಾಹನ ಸವಾರ ಮತ್ತು ಸಹ ಸವಾರ ದ್ವಿ ಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ತೀವ್ರ ರಕ್ತಗಾಯಗೊಂಡಿರುವುದಾಗಿದೆ. ಗಾಯಾಳುಗಳ ಪೈಕಿ ರಾಕೇಶ್ ರವರು ಉಜಿರೆ ಬೆನಕ ಆಸ್ಪತ್ರೆಯಲ್ಲಿ ಹಾಗೂ ಯಜ್ಞೇಶ್ ರವರು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ. ಅಪಘಾತ ನಡೆಸಿದ ಅಪರಿಚಿತ ವಾಹನವನ್ನು ಅದರ ಚಾಲಕ ಅಪಘಾತದ ಬಳಿಕ ನಿಲ್ಲಿಸದೇ ಗಾಯಾಳುಗಳನ್ನು ಉಪಚರಿಸದೇ, ಸಂಬಂಧಪಟ್ಟವರಿಗೆ ಮಾಹಿತಿ ನೀಡಿದೇ ವಾಹನ ಸಮೇತ ಪರಾರಿಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 66/2024, ಕಲಂ: 279 ,337 ,338 ಭಾ ದಂ ಸಂ 134 (a&b) ಹಾಗೂ 187 ಐ ಎಂ ವಿ ಕಾಯ್ದೆ ಯಂತೆ ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya
error: Content is protected !!