25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!