September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.

ಇವರು 1989ರಲ್ಲಿ ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಸಹಾಯಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. 1998ರಲ್ಲಿ ಬೆಳ್ತಂಗಡಿಗೆ ವರ್ಗವಣೆಗೊಂಡರು. ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಸುದೀರ್ಘ 26 ವರ್ಷ ಸೇವೆ ಸಲ್ಲಿಸಿದ್ದ ಚಿದಾನಂದ ಹೂಗಾರ್ ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ, ಪ್ರಭಾರ ತಾಂತ್ರಿಕ ಅಧಿಕಾರಿ, ಕೊಕ್ಕಡ-ವೇಣೂರು ರೈತ ಸಂಪರ್ಕ ಕೇಂದ್ರ ಹಾಗೂ ಬೀಜೋತ್ಪನ್ನ ಕೇಂದ್ರದಲ್ಲಿ ಸೇವೆಗೈದಿದ್ದಾರೆ.

ಪ್ರಸುತ್ತ ಬೆಳ್ತಂಗಡಿ ಸರಕಾರಿ ನೌಕರರ ಸಂಘದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ವಿಜಯಪುರದವರು. ಪತ್ನಿ ಪಾರ್ವತಿ, ಮಕ್ಕಳಾದ ವಿದ್ಯಾಶ್ರೀ, ವೀಣಾ ಹಾಗೂ ವಿನಯ್ ಕುಮಾರ್ ಜೊತೆ ಧರ್ಮಸ್ಥಳದಲ್ಲಿ ವಾಸ್ತ್ಯವಿದ್ದಾರೆ.

Related posts

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya
error: Content is protected !!