25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya
error: Content is protected !!