July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!