September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya
error: Content is protected !!