23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಚರು ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಉಮ್ಮರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಒಕ್ಕೂಟದ ಅಧ್ಯಕ್ಷರಾದ ಉಮ್ಮರ್ ರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ದಿವ್ಯಜ್ಯೋತಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು,ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಹರಿಣಾಕ್ಷಿಯವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ಒಕ್ಕೂಟದ ಕಾರ್ಯದರ್ಶಿಯವರು ಮಂಡಿಸಿದರು, ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು, ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ ರವರು ಉಪಸ್ಥಿತರಿದ್ದರು. ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು. ಮೋಹಿನಿರವರು ಸ್ವಾಗತಿಸಿ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!