25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ 26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶಶಿರಾಜ್ ಶೆಟ್ಟಿಯವರನ್ನು ಬಹುವಾಗಿ ಪ್ರೀತಿಸುತ್ತಿದ್ದ ಹೇಮಾವತಿ ಶೆಟ್ಟಿಯವರು ಕಳೆದ ಕೆಲವು ದಿನಗಳಿಂದ ತೀರಾ ಮಂಕಾಗಿದ್ದರು. ಪದೇ ಪದೇ ಶಶಿರಾಜ್ ಎಲ್ಲಿದ್ದಾನೆ ಎಂದು ಕೇಳುತ್ತಿದ್ದರು. ಅವನನ್ನು ನೋಡಬೇಕು ಎಂದು ಹೇಮಾವತಿ ಶೆಟ್ಟಿ ಹೇಳುತ್ತಿದ್ದರು. ಶಶಿರಾಜ್ ಶೆಟ್ಟಿಯವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದ ಬಳಿಕ ಹೇಮಾವತಿ ಶೆಟ್ಟಿ ತೀವ್ರವಾಗಿ ನೊಂದುಕೊಂಡಿದ್ದರು. ಅನಾರೋಗ್ಯದಿಂದಿದ್ದ ಹೇಮಾವತಿ ಶೆಟ್ಟಿಯವರು ಮೇ 26ರಂದು ದಿಢೀರ್ ಹೃದಯಾಘಾತಕ್ಕೀಡಾಗಿ ನಿಧನರಾದರು.

Related posts

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya
error: Content is protected !!