September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ 26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶಶಿರಾಜ್ ಶೆಟ್ಟಿಯವರನ್ನು ಬಹುವಾಗಿ ಪ್ರೀತಿಸುತ್ತಿದ್ದ ಹೇಮಾವತಿ ಶೆಟ್ಟಿಯವರು ಕಳೆದ ಕೆಲವು ದಿನಗಳಿಂದ ತೀರಾ ಮಂಕಾಗಿದ್ದರು. ಪದೇ ಪದೇ ಶಶಿರಾಜ್ ಎಲ್ಲಿದ್ದಾನೆ ಎಂದು ಕೇಳುತ್ತಿದ್ದರು. ಅವನನ್ನು ನೋಡಬೇಕು ಎಂದು ಹೇಮಾವತಿ ಶೆಟ್ಟಿ ಹೇಳುತ್ತಿದ್ದರು. ಶಶಿರಾಜ್ ಶೆಟ್ಟಿಯವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದ ಬಳಿಕ ಹೇಮಾವತಿ ಶೆಟ್ಟಿ ತೀವ್ರವಾಗಿ ನೊಂದುಕೊಂಡಿದ್ದರು. ಅನಾರೋಗ್ಯದಿಂದಿದ್ದ ಹೇಮಾವತಿ ಶೆಟ್ಟಿಯವರು ಮೇ 26ರಂದು ದಿಢೀರ್ ಹೃದಯಾಘಾತಕ್ಕೀಡಾಗಿ ನಿಧನರಾದರು.

Related posts

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya
error: Content is protected !!