July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ಕೊಡಿಯಡ್ಕ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಗೌಡ (70ವ) ಅವರು ಇಂದು(ಮೇ 29) ಮಧ್ಯಾಹ್ನ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.


ಇವರು ಇಂದು ಬೆಳಗ್ಗೆಯಿಂದ ತಮ್ಮ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತೆನ್ನಲಾಗಿದೆ. ಕೂಡಲೇ ಅವರು ತನ್ನ ಪತ್ನಿ ಸುಶೀಲರಲ್ಲಿ ಎದೆನೋವು ಆಗುತ್ತಿರುವ ಬಗ್ಗೆ ತಿಳಿಸಿದ್ದರು. ನಂತರ ಪಕ್ಕದ ಮನೆಯವರಿಗೆ ವಿಷಯ ತಿಳಿಸಿ ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ, ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆನ್ನಲಾಗಿದೆ.


ತಿಮ್ಮಪ್ಪ ಗೌಡ ಅವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ಕೊಯ್ಯುವ ವೃತ್ತಿಯಲ್ಲಿ ನೈಪುಣ್ಯತೆಯನ್ನು ಹೊಂದಿದ್ದರು. ಕೃಷಿಯ ಜೊತೆಗೆ ಸ್ಥಳೀಯ ಪರಿಸರದಲ್ಲಿ ಅಡಿಕೆ ಕೊಯ್ಯುವ ಕೆಲಸವನ್ನು ಮಾಡುತ್ತಿದ್ದು, ಸ್ಥಳೀಯ ಪರಿಸರದ ಕೃಷಿಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ಪತ್ನಿ ಸುಶೀಲ, ಓರ್ವ ಪುತ್ರಿ, ಇಬ್ಬರು ಪುತ್ರರು, ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್ ಸೇರಿ ಇಬ್ಬರು ಸಹೋದರಿಯರು, ಬಾವ ಪತ್ರಕರ್ತ ಕೆ.ಎನ್ ಗೌಡ ಹಾಗೂ ಬಂಧು-ವರ್ಗದವರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya
error: Content is protected !!