26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ಕೊಡಿಯಡ್ಕ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಗೌಡ (70ವ) ಅವರು ಇಂದು(ಮೇ 29) ಮಧ್ಯಾಹ್ನ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.


ಇವರು ಇಂದು ಬೆಳಗ್ಗೆಯಿಂದ ತಮ್ಮ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತೆನ್ನಲಾಗಿದೆ. ಕೂಡಲೇ ಅವರು ತನ್ನ ಪತ್ನಿ ಸುಶೀಲರಲ್ಲಿ ಎದೆನೋವು ಆಗುತ್ತಿರುವ ಬಗ್ಗೆ ತಿಳಿಸಿದ್ದರು. ನಂತರ ಪಕ್ಕದ ಮನೆಯವರಿಗೆ ವಿಷಯ ತಿಳಿಸಿ ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ, ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆನ್ನಲಾಗಿದೆ.


ತಿಮ್ಮಪ್ಪ ಗೌಡ ಅವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ಕೊಯ್ಯುವ ವೃತ್ತಿಯಲ್ಲಿ ನೈಪುಣ್ಯತೆಯನ್ನು ಹೊಂದಿದ್ದರು. ಕೃಷಿಯ ಜೊತೆಗೆ ಸ್ಥಳೀಯ ಪರಿಸರದಲ್ಲಿ ಅಡಿಕೆ ಕೊಯ್ಯುವ ಕೆಲಸವನ್ನು ಮಾಡುತ್ತಿದ್ದು, ಸ್ಥಳೀಯ ಪರಿಸರದ ಕೃಷಿಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ಪತ್ನಿ ಸುಶೀಲ, ಓರ್ವ ಪುತ್ರಿ, ಇಬ್ಬರು ಪುತ್ರರು, ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್ ಸೇರಿ ಇಬ್ಬರು ಸಹೋದರಿಯರು, ಬಾವ ಪತ್ರಕರ್ತ ಕೆ.ಎನ್ ಗೌಡ ಹಾಗೂ ಬಂಧು-ವರ್ಗದವರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!