September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

ಧರ್ಮಸ್ಥಳ : ಇಲ್ಲಿಯ ನೇತ್ರಾವತಿ ಸ್ಥಾನಘಟ್ಟದ ಬಳಿ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 28ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಮನೋಜ್ (42), ರವರ ದೂರಿನಂತೆ, ಮೇ. 28 ರಂದು ಮಧ್ಯಾಹ್ನ KA 19 HG 1142 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರ ರಾಕೇಶ್ ರವರು, ಸಹಸವಾರನನ್ನಾಗಿ ಯಜ್ಞೇಶ ರವರನ್ನು ಕುಳ್ಳಿರಿಕೊಂಡು ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಚಲಾಯಿಸಿಕೊಂಡು ಹೋಗುತ್ತಾ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ಥಾನಘಟ್ಟದ ಬಳಿ ತಲುಪುತ್ತಿದ್ದಂತೆ, ಅವರ ಹಿಂದಿನಿಂದ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿರುತ್ತಾರೆ.

ಪರಿಣಾಮ ದ್ವಿ ಚಕ್ರ ವಾಹನ ಸವಾರ ಮತ್ತು ಸಹ ಸವಾರ ದ್ವಿ ಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ತೀವ್ರ ರಕ್ತಗಾಯಗೊಂಡಿರುವುದಾಗಿದೆ. ಗಾಯಾಳುಗಳ ಪೈಕಿ ರಾಕೇಶ್ ರವರು ಉಜಿರೆ ಬೆನಕ ಆಸ್ಪತ್ರೆಯಲ್ಲಿ ಹಾಗೂ ಯಜ್ಞೇಶ್ ರವರು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ. ಅಪಘಾತ ನಡೆಸಿದ ಅಪರಿಚಿತ ವಾಹನವನ್ನು ಅದರ ಚಾಲಕ ಅಪಘಾತದ ಬಳಿಕ ನಿಲ್ಲಿಸದೇ ಗಾಯಾಳುಗಳನ್ನು ಉಪಚರಿಸದೇ, ಸಂಬಂಧಪಟ್ಟವರಿಗೆ ಮಾಹಿತಿ ನೀಡಿದೇ ವಾಹನ ಸಮೇತ ಪರಾರಿಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 66/2024, ಕಲಂ: 279 ,337 ,338 ಭಾ ದಂ ಸಂ 134 (a&b) ಹಾಗೂ 187 ಐ ಎಂ ವಿ ಕಾಯ್ದೆ ಯಂತೆ ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya
error: Content is protected !!