ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿಯ, ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿಯ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆಯನ್ನು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಸಮಿತಿಯ ಅಧ್ಯಕ್ಷ ಸೀತಾರಾಮ ದೀಪ ಪ್ರಜ್ವಲಿಸಿ ಉದ್ಘಾಟಿಸಿ ನಿರಂತರವಾಗಿ ಶ್ರಮವಹಿಸಿ ಸಮಾಜಕ್ಕೆ ತನ್ನದೇ ಆದ ಸೇವೆಯನ್ನು “ಶೌರ್ಯ” ವಿಪತ್ತು ಘಟಕದ ಮೂಲಕವಾಗಿ ನೀಡುತ್ತಿರುವ ಎಲ್ಲ ಸ್ವಯಂ ಸೇವಕರಿಗೆ ಶುಭ ಹಾರೈಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಂತೆ ಕರ್ನಾಟಕ ರಾಜ್ಯದ 90 ತಾಲೂಕಿನಲ್ಲಿ 10300 ಸ್ವಯಂಸೇವಕರ ಬಲಿಷ್ಠ ತಂಡ ಇಡೀ ಕರ್ನಾಟಕ ರಾಜ್ಯದ್ಯಂತ ಪ್ರಾಕೃತಿಕ ವಿಕೋಪ ಹಾಗೂ ಇನ್ನಿತರ ತುರ್ತು ಸ್ಪಂದನೆಯ ಸಂದರ್ಭದಲ್ಲಿ ಸ್ಪಂದನೆಯನ್ನು ನೀಡಿ ಇಡೀ ರಾಜ್ಯದ ಮೆಚ್ಚುಗೆಯನ್ನು ಗಳಿಸಿದ್ದು, ಇದರ ಪ್ರಥಮ ಪ್ರಯೋಗಶಾಲೆಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಾರಂಭಗೊಂಡ ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಈ ಕಾರ್ಯಕ್ರಮವು ಕರ್ನಾಟಕ ಸರಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೆಚ್ಚುಗೆಯನ್ನು ಕೂಡ ಗಳಿಸಿದೆ.

ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಈ ಕಾರ್ಯಕ್ರಮವು ಪ್ರತಿ ಗ್ರಾಮದಲ್ಲಿಯೂ ಈ ತಂಡವನ್ನು ಬಲಿಷ್ಠವಾಗಿ ಕಟ್ಟಿ ಇನ್ನು ಮಳೆಗಾಲದ ಸಂದರ್ಭದಲ್ಲಿ ಯಾವುದೇ ಕ್ಲಿಷ್ಟಕರ ಸಮಸ್ಯೆಗಳು ತನ್ನ ಊರಿನಲ್ಲಿ ಪಕ್ಕದ ಊರಿನಲ್ಲಿ ತಾಲೂಕಿನಲ್ಲಿ ಪಕ್ಕದ ತಾಲೂಕಿನಲ್ಲಿ ಸಂಭವಿಸಿದಾಗ ತಕ್ಷಣವಾಗಿ ರಾತ್ರಿ ಹಗಲಿನ್ನದೇ ತಾವು ಸೇವೆಯನ್ನು ನೀಡಲು ಬದ್ದರಿರಬೇಕು ಇದಕ್ಕೆ ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಂಡು ಎಲ್ಲಾ ಘಟಕದ ಸ್ವಯಂಸೇವಕರು ನಿರಂತರವಾಗಿ ಈ ಸೇವೆಗೆ ಕಟ್ಟಿಬದ್ಧರಾಗಿರಬೇಕೆಂದು ತಿಳಿಸಿದರು.

“ಶೌರ್ಯ” ವಿಪತ್ತು ಘಟಕದ ರಾಜ್ಯ ಯೋಜನಾಧಿಕಾರಿಗಳಾದ ಜೈವಂತ ಪಟಗಾರರವರು ಪ್ರತಿ ಘಟಕವಾರು ಇರುವಂತಹ ಸ್ವಯಂಸೇವಕರು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರತಿ ಘಟಕವಾರು ವಿಮರ್ಷಿಸಿ ಸಲಹೆ ಸೂಚನೆಯನ್ನು ನೀಡಿದರು,

ಸಭೆಯಲ್ಲಿ ಬೆಳ್ತಂಗಡಿಯ ಮಾಸ್ಟರ್ ಸ್ನೇಕ್ ಪ್ರಕಾಶ್, ಬೆಳ್ತಂಗಡಿಯ ಕ್ಯಾಪ್ಟನ್ ಸಂತೋಷ್, ಗುರುವಾಯನಕೆರೆಯ ಕ್ಯಾಪ್ಟನ್ ಸತೀಶ್, ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಯಾದ ಗಣೇಶ ಆಚಾರ್ಯ,
ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ದಯಾನಂದ, ಉಪಸ್ಥಿತರಿದ್ದು ಶುಭ ಹಾರೈಸಿದರು.

ತಾಲೂಕಿನ ಎಲ್ಲ ಘಟಕದ ಘಟಕ ಪ್ರತಿನಿಧಿಗಳು, ಘಟಕದ ಸಂಯೋಜಕರು ಹಾಗೂ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೇಲ್ವಿಚಾರಕರಾದ ವಸಂತ ,ಹರೀಶ ಕೃಷಿ ಅಧಿಕಾರಿಯಾದ ರಾಮ್ ಕುಮಾರ್ ರವರು ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ, ನಿರೂಪಿಸಿದರು.

Related posts

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya
error: Content is protected !!