29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya
error: Content is protected !!