April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!