September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya
error: Content is protected !!