22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.

ಇವರು 1989ರಲ್ಲಿ ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಸಹಾಯಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. 1998ರಲ್ಲಿ ಬೆಳ್ತಂಗಡಿಗೆ ವರ್ಗವಣೆಗೊಂಡರು. ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಸುದೀರ್ಘ 26 ವರ್ಷ ಸೇವೆ ಸಲ್ಲಿಸಿದ್ದ ಚಿದಾನಂದ ಹೂಗಾರ್ ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ, ಪ್ರಭಾರ ತಾಂತ್ರಿಕ ಅಧಿಕಾರಿ, ಕೊಕ್ಕಡ-ವೇಣೂರು ರೈತ ಸಂಪರ್ಕ ಕೇಂದ್ರ ಹಾಗೂ ಬೀಜೋತ್ಪನ್ನ ಕೇಂದ್ರದಲ್ಲಿ ಸೇವೆಗೈದಿದ್ದಾರೆ.

ಪ್ರಸುತ್ತ ಬೆಳ್ತಂಗಡಿ ಸರಕಾರಿ ನೌಕರರ ಸಂಘದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ವಿಜಯಪುರದವರು. ಪತ್ನಿ ಪಾರ್ವತಿ, ಮಕ್ಕಳಾದ ವಿದ್ಯಾಶ್ರೀ, ವೀಣಾ ಹಾಗೂ ವಿನಯ್ ಕುಮಾರ್ ಜೊತೆ ಧರ್ಮಸ್ಥಳದಲ್ಲಿ ವಾಸ್ತ್ಯವಿದ್ದಾರೆ.

Related posts

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!