23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.

ಇವರು 1989ರಲ್ಲಿ ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಸಹಾಯಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. 1998ರಲ್ಲಿ ಬೆಳ್ತಂಗಡಿಗೆ ವರ್ಗವಣೆಗೊಂಡರು. ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಸುದೀರ್ಘ 26 ವರ್ಷ ಸೇವೆ ಸಲ್ಲಿಸಿದ್ದ ಚಿದಾನಂದ ಹೂಗಾರ್ ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ, ಪ್ರಭಾರ ತಾಂತ್ರಿಕ ಅಧಿಕಾರಿ, ಕೊಕ್ಕಡ-ವೇಣೂರು ರೈತ ಸಂಪರ್ಕ ಕೇಂದ್ರ ಹಾಗೂ ಬೀಜೋತ್ಪನ್ನ ಕೇಂದ್ರದಲ್ಲಿ ಸೇವೆಗೈದಿದ್ದಾರೆ.

ಪ್ರಸುತ್ತ ಬೆಳ್ತಂಗಡಿ ಸರಕಾರಿ ನೌಕರರ ಸಂಘದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ವಿಜಯಪುರದವರು. ಪತ್ನಿ ಪಾರ್ವತಿ, ಮಕ್ಕಳಾದ ವಿದ್ಯಾಶ್ರೀ, ವೀಣಾ ಹಾಗೂ ವಿನಯ್ ಕುಮಾರ್ ಜೊತೆ ಧರ್ಮಸ್ಥಳದಲ್ಲಿ ವಾಸ್ತ್ಯವಿದ್ದಾರೆ.

Related posts

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya
error: Content is protected !!