September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.

ಇವರು 1989ರಲ್ಲಿ ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಸಹಾಯಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. 1998ರಲ್ಲಿ ಬೆಳ್ತಂಗಡಿಗೆ ವರ್ಗವಣೆಗೊಂಡರು. ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಸುದೀರ್ಘ 26 ವರ್ಷ ಸೇವೆ ಸಲ್ಲಿಸಿದ್ದ ಚಿದಾನಂದ ಹೂಗಾರ್ ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ, ಪ್ರಭಾರ ತಾಂತ್ರಿಕ ಅಧಿಕಾರಿ, ಕೊಕ್ಕಡ-ವೇಣೂರು ರೈತ ಸಂಪರ್ಕ ಕೇಂದ್ರ ಹಾಗೂ ಬೀಜೋತ್ಪನ್ನ ಕೇಂದ್ರದಲ್ಲಿ ಸೇವೆಗೈದಿದ್ದಾರೆ.

ಪ್ರಸುತ್ತ ಬೆಳ್ತಂಗಡಿ ಸರಕಾರಿ ನೌಕರರ ಸಂಘದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ವಿಜಯಪುರದವರು. ಪತ್ನಿ ಪಾರ್ವತಿ, ಮಕ್ಕಳಾದ ವಿದ್ಯಾಶ್ರೀ, ವೀಣಾ ಹಾಗೂ ವಿನಯ್ ಕುಮಾರ್ ಜೊತೆ ಧರ್ಮಸ್ಥಳದಲ್ಲಿ ವಾಸ್ತ್ಯವಿದ್ದಾರೆ.

Related posts

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya
error: Content is protected !!