30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!