ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ 26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶಶಿರಾಜ್ ಶೆಟ್ಟಿಯವರನ್ನು ಬಹುವಾಗಿ ಪ್ರೀತಿಸುತ್ತಿದ್ದ ಹೇಮಾವತಿ ಶೆಟ್ಟಿಯವರು ಕಳೆದ ಕೆಲವು ದಿನಗಳಿಂದ ತೀರಾ ಮಂಕಾಗಿದ್ದರು. ಪದೇ ಪದೇ ಶಶಿರಾಜ್ ಎಲ್ಲಿದ್ದಾನೆ ಎಂದು ಕೇಳುತ್ತಿದ್ದರು. ಅವನನ್ನು ನೋಡಬೇಕು ಎಂದು ಹೇಮಾವತಿ ಶೆಟ್ಟಿ ಹೇಳುತ್ತಿದ್ದರು. ಶಶಿರಾಜ್ ಶೆಟ್ಟಿಯವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದ ಬಳಿಕ ಹೇಮಾವತಿ ಶೆಟ್ಟಿ ತೀವ್ರವಾಗಿ ನೊಂದುಕೊಂಡಿದ್ದರು. ಅನಾರೋಗ್ಯದಿಂದಿದ್ದ ಹೇಮಾವತಿ ಶೆಟ್ಟಿಯವರು ಮೇ 26ರಂದು ದಿಢೀರ್ ಹೃದಯಾಘಾತಕ್ಕೀಡಾಗಿ ನಿಧನರಾದರು.

Leave a Comment

error: Content is protected !!