July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ 26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶಶಿರಾಜ್ ಶೆಟ್ಟಿಯವರನ್ನು ಬಹುವಾಗಿ ಪ್ರೀತಿಸುತ್ತಿದ್ದ ಹೇಮಾವತಿ ಶೆಟ್ಟಿಯವರು ಕಳೆದ ಕೆಲವು ದಿನಗಳಿಂದ ತೀರಾ ಮಂಕಾಗಿದ್ದರು. ಪದೇ ಪದೇ ಶಶಿರಾಜ್ ಎಲ್ಲಿದ್ದಾನೆ ಎಂದು ಕೇಳುತ್ತಿದ್ದರು. ಅವನನ್ನು ನೋಡಬೇಕು ಎಂದು ಹೇಮಾವತಿ ಶೆಟ್ಟಿ ಹೇಳುತ್ತಿದ್ದರು. ಶಶಿರಾಜ್ ಶೆಟ್ಟಿಯವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದ ಬಳಿಕ ಹೇಮಾವತಿ ಶೆಟ್ಟಿ ತೀವ್ರವಾಗಿ ನೊಂದುಕೊಂಡಿದ್ದರು. ಅನಾರೋಗ್ಯದಿಂದಿದ್ದ ಹೇಮಾವತಿ ಶೆಟ್ಟಿಯವರು ಮೇ 26ರಂದು ದಿಢೀರ್ ಹೃದಯಾಘಾತಕ್ಕೀಡಾಗಿ ನಿಧನರಾದರು.

Related posts

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya
error: Content is protected !!