September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ಕೊಡಿಯಡ್ಕ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಗೌಡ (70ವ) ಅವರು ಇಂದು(ಮೇ 29) ಮಧ್ಯಾಹ್ನ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.


ಇವರು ಇಂದು ಬೆಳಗ್ಗೆಯಿಂದ ತಮ್ಮ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತೆನ್ನಲಾಗಿದೆ. ಕೂಡಲೇ ಅವರು ತನ್ನ ಪತ್ನಿ ಸುಶೀಲರಲ್ಲಿ ಎದೆನೋವು ಆಗುತ್ತಿರುವ ಬಗ್ಗೆ ತಿಳಿಸಿದ್ದರು. ನಂತರ ಪಕ್ಕದ ಮನೆಯವರಿಗೆ ವಿಷಯ ತಿಳಿಸಿ ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ, ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆನ್ನಲಾಗಿದೆ.


ತಿಮ್ಮಪ್ಪ ಗೌಡ ಅವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ಕೊಯ್ಯುವ ವೃತ್ತಿಯಲ್ಲಿ ನೈಪುಣ್ಯತೆಯನ್ನು ಹೊಂದಿದ್ದರು. ಕೃಷಿಯ ಜೊತೆಗೆ ಸ್ಥಳೀಯ ಪರಿಸರದಲ್ಲಿ ಅಡಿಕೆ ಕೊಯ್ಯುವ ಕೆಲಸವನ್ನು ಮಾಡುತ್ತಿದ್ದು, ಸ್ಥಳೀಯ ಪರಿಸರದ ಕೃಷಿಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ಪತ್ನಿ ಸುಶೀಲ, ಓರ್ವ ಪುತ್ರಿ, ಇಬ್ಬರು ಪುತ್ರರು, ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್ ಸೇರಿ ಇಬ್ಬರು ಸಹೋದರಿಯರು, ಬಾವ ಪತ್ರಕರ್ತ ಕೆ.ಎನ್ ಗೌಡ ಹಾಗೂ ಬಂಧು-ವರ್ಗದವರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya
error: Content is protected !!