September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

ಧರ್ಮಸ್ಥಳ : ಇಲ್ಲಿಯ ನೇತ್ರಾವತಿ ಸ್ಥಾನಘಟ್ಟದ ಬಳಿ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 28ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಮನೋಜ್ (42), ರವರ ದೂರಿನಂತೆ, ಮೇ. 28 ರಂದು ಮಧ್ಯಾಹ್ನ KA 19 HG 1142 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರ ರಾಕೇಶ್ ರವರು, ಸಹಸವಾರನನ್ನಾಗಿ ಯಜ್ಞೇಶ ರವರನ್ನು ಕುಳ್ಳಿರಿಕೊಂಡು ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಚಲಾಯಿಸಿಕೊಂಡು ಹೋಗುತ್ತಾ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ಥಾನಘಟ್ಟದ ಬಳಿ ತಲುಪುತ್ತಿದ್ದಂತೆ, ಅವರ ಹಿಂದಿನಿಂದ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿರುತ್ತಾರೆ.

ಪರಿಣಾಮ ದ್ವಿ ಚಕ್ರ ವಾಹನ ಸವಾರ ಮತ್ತು ಸಹ ಸವಾರ ದ್ವಿ ಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ತೀವ್ರ ರಕ್ತಗಾಯಗೊಂಡಿರುವುದಾಗಿದೆ. ಗಾಯಾಳುಗಳ ಪೈಕಿ ರಾಕೇಶ್ ರವರು ಉಜಿರೆ ಬೆನಕ ಆಸ್ಪತ್ರೆಯಲ್ಲಿ ಹಾಗೂ ಯಜ್ಞೇಶ್ ರವರು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ. ಅಪಘಾತ ನಡೆಸಿದ ಅಪರಿಚಿತ ವಾಹನವನ್ನು ಅದರ ಚಾಲಕ ಅಪಘಾತದ ಬಳಿಕ ನಿಲ್ಲಿಸದೇ ಗಾಯಾಳುಗಳನ್ನು ಉಪಚರಿಸದೇ, ಸಂಬಂಧಪಟ್ಟವರಿಗೆ ಮಾಹಿತಿ ನೀಡಿದೇ ವಾಹನ ಸಮೇತ ಪರಾರಿಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 66/2024, ಕಲಂ: 279 ,337 ,338 ಭಾ ದಂ ಸಂ 134 (a&b) ಹಾಗೂ 187 ಐ ಎಂ ವಿ ಕಾಯ್ದೆ ಯಂತೆ ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya
error: Content is protected !!