25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya
error: Content is protected !!