23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!