30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!