September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya
error: Content is protected !!