July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ.


ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆ ನೋವು ಎಂದು ಹೇಳುತ್ತಿದ್ದು, ಮೇ 21 ರಂದು ಕುಪ್ಪೆಟ್ಟಿ ಎಂಬಲ್ಲಿ ಗಾರೆ ಕೆಲಸಕ್ಕೆ ಹೋದವನಿಗೆ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಗುಣಮುಖರಾಗಿ ಮನೆಗೆ ಬಂದವನಿಗೆ ಮತ್ತೆ ಹೊಟ್ಟೆ ನೋವು ಪ್ರಾರಂಭವಾಗಿ ಮೇ ೨೩ರಂದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಮೇ ೨೫ರಂದು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಕೆ.ಎಂ.ಸಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ಸಮಯ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು ರಾತ್ರಿ ಮೃತಪಟ್ಟಿದ್ದು, ಈ ಬಗ್ಗೆ ಮೃತರ ಸಹೋದರ ಪುನಿತ್ ಕುಮಾರ್ ಜಿ. ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!