July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳವು ಮಾಡಿದ ಕುತೂಹಲಕರ ಘಟನೆ ಮೇ 22ರಂದು ನಡೆದಿದೆ.

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಡೈರೆಕ್ಟರ್‌ ಫಾ| ಯೋಹನನ್‌ ಕೆ ಜೆ ,ರವರ ದೂರಿನಂತೆ, ದಿನಾಂಕ 22.05.2024 ರಂದು ಸಂಜೆ, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿರುವ, ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ, ಇಬ್ಬರು ಯುವಕರು ಆಸ್ಪತ್ರೆಯ ಗೇಟಿನ ಮೂಲಕ ಒಳ ಬಂದು ಆಸ್ಪತ್ರೆಯ ಒಳ ಹೋಗಲು ಪ್ರಯತ್ನಿಸಿದ್ದು, ಈ ವೇಳೆ ಫಾ||ಟೋಮ್‌ ಎಂಬವರು ಅವರನ್ನು ಪ್ರಶ್ನಿಸಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಅದೇ ಯುವಕರು ಯಾರಿಗೂ ತಿಳಿಯದಂತೆ, ಆಸ್ಪತ್ರೆಯ ಹಿಂಭಾಗಕ್ಕೆ ಹೋಗಿ ಅಲ್ಲಿ ಇರಿಸಿದ್ದ ಏಣಿಯ ಮೂಲಕ ಒಂದನೇ ಮಹಡಿಗೆ ಹೋಗಿ ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಅಲ್ಲಿದ್ದ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳುವು ಮಾಡಿಕೊಂಡು ಹೋಗಿದ್ದು, 2 ಸೀಲ್ ಗಳ ಒಟ್ಟು ಮೌಲ್ಯ 600/- ರೂ ಆಗಬಹುದು, ಆರೋಪಿಗಳು ಆಸ್ಪತ್ರೆಯಿಂದ ಹೋಗುವಾಗ ಸಂಸ್ಥೆಯ ಸಿಬ್ಬಂದಿಗಳಿಗೆ ಕೊಲೆ ಬೆದರಿಕೆಯನ್ನು ಕೂಡ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 44/2024 ಕಲಂ:454,380,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!