25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳವು ಮಾಡಿದ ಕುತೂಹಲಕರ ಘಟನೆ ಮೇ 22ರಂದು ನಡೆದಿದೆ.

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಡೈರೆಕ್ಟರ್‌ ಫಾ| ಯೋಹನನ್‌ ಕೆ ಜೆ ,ರವರ ದೂರಿನಂತೆ, ದಿನಾಂಕ 22.05.2024 ರಂದು ಸಂಜೆ, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿರುವ, ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ, ಇಬ್ಬರು ಯುವಕರು ಆಸ್ಪತ್ರೆಯ ಗೇಟಿನ ಮೂಲಕ ಒಳ ಬಂದು ಆಸ್ಪತ್ರೆಯ ಒಳ ಹೋಗಲು ಪ್ರಯತ್ನಿಸಿದ್ದು, ಈ ವೇಳೆ ಫಾ||ಟೋಮ್‌ ಎಂಬವರು ಅವರನ್ನು ಪ್ರಶ್ನಿಸಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಅದೇ ಯುವಕರು ಯಾರಿಗೂ ತಿಳಿಯದಂತೆ, ಆಸ್ಪತ್ರೆಯ ಹಿಂಭಾಗಕ್ಕೆ ಹೋಗಿ ಅಲ್ಲಿ ಇರಿಸಿದ್ದ ಏಣಿಯ ಮೂಲಕ ಒಂದನೇ ಮಹಡಿಗೆ ಹೋಗಿ ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಅಲ್ಲಿದ್ದ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳುವು ಮಾಡಿಕೊಂಡು ಹೋಗಿದ್ದು, 2 ಸೀಲ್ ಗಳ ಒಟ್ಟು ಮೌಲ್ಯ 600/- ರೂ ಆಗಬಹುದು, ಆರೋಪಿಗಳು ಆಸ್ಪತ್ರೆಯಿಂದ ಹೋಗುವಾಗ ಸಂಸ್ಥೆಯ ಸಿಬ್ಬಂದಿಗಳಿಗೆ ಕೊಲೆ ಬೆದರಿಕೆಯನ್ನು ಕೂಡ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 44/2024 ಕಲಂ:454,380,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya
error: Content is protected !!