25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!