September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಇದರ ಬೆಳ್ಳಿಹಬ್ಬ ಸಂಭ್ರಮ ಕಾರ್ಯಕ್ರಮವು ಮೇ 30ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರು ರಾಜರ್ಷಿ ಪದ್ಮಭೂಷಣ ಡಾ.ವೀರೇಂದ್ರ ಹೆಗ್ಗಡೆಯವರು
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಗೌರವಾಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಮಕ್ಕಳ ಹೃದ್ರೋಗ ತಜ್ಞೆ ಡಾ।। ವಿಜಯಲಕ್ಷ್ಮಿ ಬಾಳೇಕುಂದ್ರಿ, ಬೆಂಗಳೂರಿನ ಖ್ಯಾತ ಚಿತ್ರನಟಿ ಶ್ರೀಮತಿ ಪದ್ಮಜಾ ರಾವ್‌ ಭಾಗವಹಿಸಿದ್ದರು. ಸಮಾರಂಭದಲ್ಲಿ ರಜತ ಸಂಚಿಕೆ ಲೋಕಾರ್ಪಣೆಯನ್ನು ನೆರವೇರಿಸಿದರು.
ಸಮಾರಂಭದಲ್ಲಿ ಶ್ರೀಮತಿ ಸುಮನ್ ಪತ್ರಾವಳಿ ಬೆಳಗಾವಿ, ಶ್ರೀಮತಿ ವೀಣಾ ಶೆಟ್ಟಿ ಮೂಡುಬಿದಿರೆ, ಶ್ರೀಮತಿ ಸುಶೀಮಾ ಯಶವಂತ್ ಬೆಂಗಳೂರು, ಶ್ರೀಮತಿ ಛಾಯಾ ಹುಣಸೂರು, ಕುಮಾರಿ ಅನನ್ಯ, ಮೈಸೂರು ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಧರ್ಮಸ್ಥಳದ ಡಿ. ಹರ್ಷೆಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಕೇಸರಿ ರತ್ನರಾಜ್, ಶೀಲಾ ಅನಂತರಾಜ್
ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು , ನಿರ್ದೇಶಕರು , ಸದಸ್ಯರು ಉಪಸ್ಥಿತರಿದ್ದರು.

ಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚ್ಚಶ್ರೀಮತಿ ಪದ್ಮನಿ ಪದ್ಮರಾಜ್‌ ಸ್ವಾಗತಿಸಿದರು, ವೈಜಯಂತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮುದಾ ನಾಗಭೂಷಣ್‌ ನಿರೂಪಿಸಿದರು.

Related posts

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya
error: Content is protected !!