25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜರ್ ಆಗಿದ್ದು, ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.

ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

Related posts

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!