23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!