ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಯೋಜನೆಯ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸು ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನಿರ್ಗತಿಕರ ಮಾಶಾಸನವನ್ನು ಉಜಿರೆ ಕಿರಿಯಾಡಿ ಇಂದಿರಾರವರಿಗೆ ಕ್ಷೇತ್ರದಿಂದ ಮಂಜೂರಾತಿ ನೀಡಿದ್ದು, ಇನ್ನು ಪ್ರತೀ ತಿಂಗಳು ಕೂಡ ಇವರಿಗೆ ಒಂದು ವರ್ಷದ ಅವಧಿಗೆ ಕ್ಷೇತ್ರದಿಂದ ಮಾಸಾಸನವು ಸಿಗಲಿದ್ದು, ಮಂಜೂರಾತಿ ಪತ್ರವನ್ನು ಉಜಿರೆ ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಿತರಿಸಿದರು.

ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಸಮನ್ವಯಧಿಕಾರಿ ಶ್ರೀಮತಿ ಮಧುರ, ವಲಯ ವೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಶ್ರೀಮತಿ ಪ್ರೇಮಲತಾ ಉಪಸ್ಥಿತರಿದ್ದರು.

Leave a Comment

error: Content is protected !!