27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳವು ಮಾಡಿದ ಕುತೂಹಲಕರ ಘಟನೆ ಮೇ 22ರಂದು ನಡೆದಿದೆ.

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಡೈರೆಕ್ಟರ್‌ ಫಾ| ಯೋಹನನ್‌ ಕೆ ಜೆ ,ರವರ ದೂರಿನಂತೆ, ದಿನಾಂಕ 22.05.2024 ರಂದು ಸಂಜೆ, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿರುವ, ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ, ಇಬ್ಬರು ಯುವಕರು ಆಸ್ಪತ್ರೆಯ ಗೇಟಿನ ಮೂಲಕ ಒಳ ಬಂದು ಆಸ್ಪತ್ರೆಯ ಒಳ ಹೋಗಲು ಪ್ರಯತ್ನಿಸಿದ್ದು, ಈ ವೇಳೆ ಫಾ||ಟೋಮ್‌ ಎಂಬವರು ಅವರನ್ನು ಪ್ರಶ್ನಿಸಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಅದೇ ಯುವಕರು ಯಾರಿಗೂ ತಿಳಿಯದಂತೆ, ಆಸ್ಪತ್ರೆಯ ಹಿಂಭಾಗಕ್ಕೆ ಹೋಗಿ ಅಲ್ಲಿ ಇರಿಸಿದ್ದ ಏಣಿಯ ಮೂಲಕ ಒಂದನೇ ಮಹಡಿಗೆ ಹೋಗಿ ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಅಲ್ಲಿದ್ದ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳುವು ಮಾಡಿಕೊಂಡು ಹೋಗಿದ್ದು, 2 ಸೀಲ್ ಗಳ ಒಟ್ಟು ಮೌಲ್ಯ 600/- ರೂ ಆಗಬಹುದು, ಆರೋಪಿಗಳು ಆಸ್ಪತ್ರೆಯಿಂದ ಹೋಗುವಾಗ ಸಂಸ್ಥೆಯ ಸಿಬ್ಬಂದಿಗಳಿಗೆ ಕೊಲೆ ಬೆದರಿಕೆಯನ್ನು ಕೂಡ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 44/2024 ಕಲಂ:454,380,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya
error: Content is protected !!