26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳವು ಮಾಡಿದ ಕುತೂಹಲಕರ ಘಟನೆ ಮೇ 22ರಂದು ನಡೆದಿದೆ.

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಡೈರೆಕ್ಟರ್‌ ಫಾ| ಯೋಹನನ್‌ ಕೆ ಜೆ ,ರವರ ದೂರಿನಂತೆ, ದಿನಾಂಕ 22.05.2024 ರಂದು ಸಂಜೆ, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿರುವ, ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ, ಇಬ್ಬರು ಯುವಕರು ಆಸ್ಪತ್ರೆಯ ಗೇಟಿನ ಮೂಲಕ ಒಳ ಬಂದು ಆಸ್ಪತ್ರೆಯ ಒಳ ಹೋಗಲು ಪ್ರಯತ್ನಿಸಿದ್ದು, ಈ ವೇಳೆ ಫಾ||ಟೋಮ್‌ ಎಂಬವರು ಅವರನ್ನು ಪ್ರಶ್ನಿಸಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಅದೇ ಯುವಕರು ಯಾರಿಗೂ ತಿಳಿಯದಂತೆ, ಆಸ್ಪತ್ರೆಯ ಹಿಂಭಾಗಕ್ಕೆ ಹೋಗಿ ಅಲ್ಲಿ ಇರಿಸಿದ್ದ ಏಣಿಯ ಮೂಲಕ ಒಂದನೇ ಮಹಡಿಗೆ ಹೋಗಿ ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಅಲ್ಲಿದ್ದ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳುವು ಮಾಡಿಕೊಂಡು ಹೋಗಿದ್ದು, 2 ಸೀಲ್ ಗಳ ಒಟ್ಟು ಮೌಲ್ಯ 600/- ರೂ ಆಗಬಹುದು, ಆರೋಪಿಗಳು ಆಸ್ಪತ್ರೆಯಿಂದ ಹೋಗುವಾಗ ಸಂಸ್ಥೆಯ ಸಿಬ್ಬಂದಿಗಳಿಗೆ ಕೊಲೆ ಬೆದರಿಕೆಯನ್ನು ಕೂಡ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 44/2024 ಕಲಂ:454,380,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!