ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ವೇಣೂರು: ಮೇಸ್ತಿ ಕೆಲಸ ನಿರ್ವಹಿಸುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮೂಡಬಿದ್ರೆಯಲ್ಲಿ ಇಂದು ನಡೆದಿದೆ.

ಮೃತ ಯುವಕನನ್ನು ವೇಣೂರು ಕುಕ್ಕೇಡಿ ಸಮೀಪದ ಕರ್ತ್ಯಾರ್ ಮನೆಯ ಸುರೇಶ್ ಕುಲಾಲ್ (32ವ) ಎಂದು ಗುರುತಿಸಲಾಗಿದೆ. ಕೆಲವು ಸಮಯದಿಂದ ಮೇಸ್ತ್ರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಇತ್ತಿಚೇಗೆ ಮೂಡಬಿದ್ರೆಯಲ್ಲಿ ಶಾಲೆಯೊಂದರ ಕೆಲಸದಲ್ಲಿ ನಿರತರಾಗಿದ್ದರೂ. ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಕಲ್ಲಿನ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಈ ಸಂಭಂಧ ಮೂಡಬಿದ್ರೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಸಹೋದರ,ಸಹೋದರಿಯರು, ಕುಟುಂಬಸ್ಥರು ಹಾಗೂ ಮಿತ್ರರನ್ನು ಆಗಲಿದ್ದಾರೆ.

Leave a Comment

error: Content is protected !!