September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಇದರ ಬೆಳ್ಳಿಹಬ್ಬ ಸಂಭ್ರಮ ಕಾರ್ಯಕ್ರಮವು ಮೇ 30ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರು ರಾಜರ್ಷಿ ಪದ್ಮಭೂಷಣ ಡಾ.ವೀರೇಂದ್ರ ಹೆಗ್ಗಡೆಯವರು
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಗೌರವಾಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಮಕ್ಕಳ ಹೃದ್ರೋಗ ತಜ್ಞೆ ಡಾ।। ವಿಜಯಲಕ್ಷ್ಮಿ ಬಾಳೇಕುಂದ್ರಿ, ಬೆಂಗಳೂರಿನ ಖ್ಯಾತ ಚಿತ್ರನಟಿ ಶ್ರೀಮತಿ ಪದ್ಮಜಾ ರಾವ್‌ ಭಾಗವಹಿಸಿದ್ದರು. ಸಮಾರಂಭದಲ್ಲಿ ರಜತ ಸಂಚಿಕೆ ಲೋಕಾರ್ಪಣೆಯನ್ನು ನೆರವೇರಿಸಿದರು.
ಸಮಾರಂಭದಲ್ಲಿ ಶ್ರೀಮತಿ ಸುಮನ್ ಪತ್ರಾವಳಿ ಬೆಳಗಾವಿ, ಶ್ರೀಮತಿ ವೀಣಾ ಶೆಟ್ಟಿ ಮೂಡುಬಿದಿರೆ, ಶ್ರೀಮತಿ ಸುಶೀಮಾ ಯಶವಂತ್ ಬೆಂಗಳೂರು, ಶ್ರೀಮತಿ ಛಾಯಾ ಹುಣಸೂರು, ಕುಮಾರಿ ಅನನ್ಯ, ಮೈಸೂರು ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಧರ್ಮಸ್ಥಳದ ಡಿ. ಹರ್ಷೆಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಕೇಸರಿ ರತ್ನರಾಜ್, ಶೀಲಾ ಅನಂತರಾಜ್
ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು , ನಿರ್ದೇಶಕರು , ಸದಸ್ಯರು ಉಪಸ್ಥಿತರಿದ್ದರು.

ಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚ್ಚಶ್ರೀಮತಿ ಪದ್ಮನಿ ಪದ್ಮರಾಜ್‌ ಸ್ವಾಗತಿಸಿದರು, ವೈಜಯಂತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮುದಾ ನಾಗಭೂಷಣ್‌ ನಿರೂಪಿಸಿದರು.

Related posts

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya
error: Content is protected !!