ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಬೆಳ್ತಂಗಡಿ; ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಸಾವನ್ನಪ್ಪಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್‌ ಎಂಜಿರದ ಪರಕ್ಕಳದ ಸ್ನೇರಿಯಾ ಎಂಬವರ ಪುತ್ರ.

ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್‌ ಸಾವನ್ನಪ್ಪಿದ್ದಾರೆ.

Leave a Comment

error: Content is protected !!