25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮವು ಮೇ 30ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ಶಶಿಧರ ಎಂ. ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ವೃತ್ತ ಕಾರ್ಮಿಕ ನಿರೀಕ್ಷಕ ಹರೀಶ್ ಎಸ್ ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರು ಶಿವಕುಮಾರ್ ಎಸ್. ಎಂ ರವರು ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಕುರಿತು ಕಾನೂನು ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು, ತಾ.ಕಾ. ಸೇ.ಸ. ಸದಸ್ಯ ಕಾರ್ಯದರ್ಶಿ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ನ್ಯಾಯಾಲಯ ಜೆ. ಎಂ.ಎಫ್.ಸಿ. ವಿಜಯೇಂದ್ರ ಟಿ.ಹೆಚ್., ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ., ಸ್ಪಂದನ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ವಸಂತ ನಡ ಉಪಸ್ಥಿತರಿದ್ದರು.

Related posts

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya
error: Content is protected !!