24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!