24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya
error: Content is protected !!