September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya
error: Content is protected !!