25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya
error: Content is protected !!