September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

ಬೆಳ್ತಂಗಡಿ:ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಗ್ರೇಟೆಡ್ ಪದವಿ ಪೂರ್ವ ಕಾಲೇಜಾಗಿ ಎಕ್ಸೆಲ್ ವಿದ್ಯಾಸಂಸ್ಥೆ ಹೊರಹೊಮ್ಮಿದೆ.


(ಬೆಳ್ತಂಗಡಿ) ಗುರುವಾಯನಕೆರೆ, ಇಲ್ಲಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ರಾರಾಜಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗಳ ಫಲಿತಾಂಶದೊಂದಿಗೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಪ್ರಸ್ತುತ 2024- 25 ನೇ ಸಾಲಿನಲ್ಲಿ ಸಂಸ್ಥೆಯು ವಾಣಿಜ್ಯ ವಿಭಾಗದಲ್ಲಿ ಕಾರ್ಯಾರಂಭ ಮಾಡುತ್ತಿದೆ. ಇಂಟಗ್ರೇಟೆಡ್ ಕಲಿಕಾ ವ್ಯವಸ್ಥೆಯ ವಾಣಿಜ್ಯ ವಿಭಾಗವನ್ನು ಹೊಂದುತ್ತಿರುವುದು ರಾಜ್ಯದಲ್ಲೇ ಪ್ರಥಮ ಬಾರಿಗೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಳ್ಳುತ್ತಿದೆ.
ಜಿಲ್ಲೆಯ ನಾನಾ ಭಾಗಗಳಲ್ಲಿ ಯಾವುದೇ ಸರಕಾರಿ ಅಥವಾ ಖಾಸಗಿ ಕಾಲೇಜುಗಳಲ್ಲಿ ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪ್ರತಿ ಭಾನುವಾರ ಸಿ.ಎ. ಫೌಂಡೇಶನ್ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳ ಸಾಧನೆಗೆ ಅವಕಾಶವನ್ನು ಒದಗಿಸುತ್ತಿದೆ.
ಈಗಾಗಲೇ ಭಾನುವಾರದ ತರಗತಿಗಳಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ತರಗತಿಗಳನ್ನು ಎರಡು ಕಡೆಗಳಲ್ಲಿ ನಡೆಸಲಾಗುತ್ತದೆ. ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ನಡೆಯಲಿದ್ದು ಸರಿ ಸುಮಾರು 15 ವರ್ಷಗಳ ಅನುಭವ ಹೊಂದಿರುವ ನುರಿತ ಅಧ್ಯಾಪಕ ವರ್ಗವನ್ನು ಹೊಂದಿಕೊಂಡಿದೆ.
ಪ್ರತಿ ಭಾನುವಾರ ಈ ತರಗತಿಗಳು ನಡೆಯುತ್ತಿದ್ದು, ಭಾಗವಹಿಸುವ ಮಕ್ಕಳಿಗೆ ನಿರ್ದಿಷ್ಟ ತರಬೇತಿಯನ್ನು ನೀಡಲಾಗುವುದಲ್ಲದೆ ಇದರೊಂದಿಗೆ ಅಣುಕು ಪರೀಕ್ಷೆಗಳು, ಮಾರ್ಗದರ್ಶನ, ತರಬೇತಿ ಹಾಗೂ ವೈಯಕ್ತಿಕ ಗಮನ ಹರಿಸಿ ವಿದ್ಯಾರ್ಥಿಯು ಸಿ.ಎ ಫೌಂಡೇಶನ್ ತರಗತಿಯಲ್ಲಿ ಉತ್ತೀರ್ಣನಾಗುವಲ್ಲಿ ಸಂಪೂರ್ಣ ಸಹಕಾರವಿರುತ್ತದೆ.

ಎಕ್ಸೆಲ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಸುಮಂತ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಕಾಲೇಜು ಈ ವರೆಗೆ ವಿಜ್ಞಾನ ಕ್ಷೇತ್ರದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದು, ಇದೀಗ ವಾಣಿಜ್ಯ ಕ್ಷೇತ್ರದಲ್ಲೂ ತನ್ನದೇ ಆದ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಂತಿದೆ. ಕೇವಲ ಪಠ್ಯ ಚಟುವಟಿಕೆಗಳನ್ನು ಮಾತ್ರವಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತೆರೆದ ಅವಕಾಶವನ್ನು ಹೊಂದಿದೆ. ಇದರೊಂದಿಗೆ ಮಕ್ಕಳು ವಾಣಿಜ್ಯ ವಿಭಾದಲ್ಲಿ ಪರಿಣತಿ ಹೊದುವುದಕ್ಕಾಗಿ ಅನೇಕ ಪ್ರಾಯೋಗಿಕ ತರಗತಿಗಳು ಹಾಗೂ ಅಭ್ಯಾಸ ಕ್ರಮವನ್ನು ಜೋಡಿಸಿಕೊಂಡಿರುತ್ತದೆ.


ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಆರಂಭವಾಗುವ ವಾಣಿಜ್ಯ ವಿಭಾಗದ ನೇತೃತ್ವವನ್ನು ಡೀನ್ ಸಂತೋಷ್ ಕೆ.ಕೆ. ಹಾಗೂ ವಿಭಾಗ ಸಂಯೋಜಕರಾದ ಪ್ರಭಾಕರ ದೇವಾಡಿಗರವರು, ವ್ಯವಹಾರ ಶಾಸ್ತ್ರ ವಿಭಾಗದಲ್ಲಿ ಪ್ರಸನ್ನ ಮತ್ತು ಲೆಕ್ಕಶಾಸ್ತ್ರ ವಿಭಾಗದಲ್ಲಿ ರವಿಯವರು ಮುನ್ನಲೆಯಲ್ಲಿದ್ದಾರೆ. ಭಾನುವಾರದ ಸಿ.ಎ. ಫೌಂಡೇಶನ್ ತರಗತಿಗಳಿಗಾಗಿ ಈಗಾಗಲೇ ದಾಖಲಾತಿ ಪ್ರಾರಂಭವಾಗಿದ್ದು ಆಸಕ್ತರು ದೂರವಾಣಿ 9880899769, 9902284110 ಅಥವಾ ನೇರವಾಗಿ ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.

Related posts

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!