23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳವು ಮಾಡಿದ ಕುತೂಹಲಕರ ಘಟನೆ ಮೇ 22ರಂದು ನಡೆದಿದೆ.

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಡೈರೆಕ್ಟರ್‌ ಫಾ| ಯೋಹನನ್‌ ಕೆ ಜೆ ,ರವರ ದೂರಿನಂತೆ, ದಿನಾಂಕ 22.05.2024 ರಂದು ಸಂಜೆ, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿರುವ, ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ, ಇಬ್ಬರು ಯುವಕರು ಆಸ್ಪತ್ರೆಯ ಗೇಟಿನ ಮೂಲಕ ಒಳ ಬಂದು ಆಸ್ಪತ್ರೆಯ ಒಳ ಹೋಗಲು ಪ್ರಯತ್ನಿಸಿದ್ದು, ಈ ವೇಳೆ ಫಾ||ಟೋಮ್‌ ಎಂಬವರು ಅವರನ್ನು ಪ್ರಶ್ನಿಸಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಅದೇ ಯುವಕರು ಯಾರಿಗೂ ತಿಳಿಯದಂತೆ, ಆಸ್ಪತ್ರೆಯ ಹಿಂಭಾಗಕ್ಕೆ ಹೋಗಿ ಅಲ್ಲಿ ಇರಿಸಿದ್ದ ಏಣಿಯ ಮೂಲಕ ಒಂದನೇ ಮಹಡಿಗೆ ಹೋಗಿ ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಅಲ್ಲಿದ್ದ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳುವು ಮಾಡಿಕೊಂಡು ಹೋಗಿದ್ದು, 2 ಸೀಲ್ ಗಳ ಒಟ್ಟು ಮೌಲ್ಯ 600/- ರೂ ಆಗಬಹುದು, ಆರೋಪಿಗಳು ಆಸ್ಪತ್ರೆಯಿಂದ ಹೋಗುವಾಗ ಸಂಸ್ಥೆಯ ಸಿಬ್ಬಂದಿಗಳಿಗೆ ಕೊಲೆ ಬೆದರಿಕೆಯನ್ನು ಕೂಡ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 44/2024 ಕಲಂ:454,380,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!